ರಾಜ್ಯದ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

WhatsApp Group Join Now
Telegram Group Join Now

2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಶಿಕ್ಷಕರ / ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಮಂಜೂರು ಮಾಡುವ ಸಲುವಾಗಿ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ದಿನಾಂಕ 01/12/2024 ರಿಂದ ದಿನಾಂಕ 30/12/2024ರವರೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕಡ್ಡಾಯವಾಗಿ online ಮೂಲಕವೇ ಭರ್ತಿ ಮಾಡುವುದು. ಕಚೇರಿಗೆ ಬರುವ ಭೌತಿಕ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
TBF/SWF Online Services ಮೂಲಕ ಅಜೀವ ಸದಸ್ಯತ್ವ ಅಥವಾ ಹಳೆಯ ಕಾರ್ಡ್ ಆನ್ಲೈನ್ ಮೂಲಕ ನವೀಕರಿಸಿದ ಶಿಕ್ಷಕರು ಉನ್ನತ ವ್ಯಾಸಂಗ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಬಹುದು. ತಂದೆ/ತಾಯಿ ಇಬ್ಬರು ಉಪನ್ಯಾಸಕರಾಗಿದ್ದಲ್ಲಿ ಒಂದು ಅರ್ಜಿ ಮಾತ್ರ ಸಲ್ಲಿಸಲು ಅವಕಾಶ ಇರುತ್ತದೆ.
ಈ ಕೆಳಕಂಡಂತೆ ಅರ್ಜಿ ಸಲ್ಲಿಸುವುದು

  1. ಸೇವೆಯಲ್ಲಿರುವ ಶಿಕ್ಷಕರು DDO ಗಳ ಸಹಿ ಪಡೆಯುವುದು. ನಿವೃತ್ತ ಶಿಕ್ಷಕರು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಅರ್ಜಿ ಸಲ್ಲಿಸುವುದು.
  2. ಅರ್ಜಿಯಲ್ಲಿ ನಮೂದಾಗಿರುವ ಕೋರ್ಸ್ ಗಳಿಗೆ ಮಾತ್ರ ಅವಕಾಶ.
  3. CA, PHD ಕೋರ್ಸ್ ಗಳಿಗೆ ಧನಸಹಾಯ ನೀಡಲಾಗುವುದಿಲ್ಲ.
  4. ಬೋಧಕೇತರ ಸಿಬ್ಬಂದಿಗಳ ಮಕ್ಕಳಿಗೆ ಧನಸಹಾಯ ನೀಡಲಾಗುವುದಿಲ್ಲ.
  5. ಶಿಕ್ಷಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  6. ಅನುತ್ತೀರ್ಣ/ಸಂಜೆ ಕಾಲೇಜು/ಮುಕ್ತ ವಿಶ್ವವಿದ್ಯಾಲಯ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಲಾಗುವುದಿಲ್ಲ.
  7. 31/12/2024ರ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
  8. ವ್ಯಾಸಂಗ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ.
  9. ರಾಷ್ಟ್ರೀಕೃತ ಬ್ಯಾಂಕುಗಳ ಅಕೌಂಟ್ ನಂಬರ್ ಹಾಗೂ IFSC Code ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.

WhatsApp Group Join Now
Telegram Group Join Now
Sharing Is Caring:

Leave a Comment