2025-26ನೇ ಸಾಲಿನ ಆದರ್ಶ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುಸರಿಸಬೇಕಾದ ಸೂಚನೆಗಳು:-
ಸಾಮಾನ್ಯ ಸೂಚನೆಗಳು :
- ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಭ್ಯರ್ಥಿಗಳು ಜಾಹಿರಾತು, ಸೂಚನೆಗಳನ್ನು ಅರ್ಥೈಸಿಕೊಂಡು ಅರ್ಹ ಮಾನದಂಡಗಳು ತೃಪ್ತಿಕರವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.
- 5ನೇ ತರಗತಿ ಓದುತ್ತಿರುವ ಕರ್ನಾಟಕ ರಾಜ್ಯದ ನಿವಾಸಿ ವಿದ್ಯಾರ್ಥಿಗಳಿಗೆ ಮಾತ್ರ ಈ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು, ಇತರೆ ರಾಜ್ಯಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆ ಹೊಂದಿರುವುದು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
- ಆದರ್ಶ ವಿದ್ಯಾಲಯಗಳಿರುವ ಬ್ಲಾಕ್ಗಳಲ್ಲಿ ವಾಸಿಸುವ ಅಥವಾ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಆದರೆ ಅಭ್ಯರ್ಥಿಗಳು ಬೇರೆ ಬ್ಲಾಕ್ಗಳಲ್ಲಿ ವಾಸಿಸುತ್ತಿದ್ದಲ್ಲಿ ಅಥವಾ ಅಧ್ಯಯನ ಮಾಡುತ್ತಿದ್ದಲ್ಲಿ ಅಧಿಸೂಚನೆಯನ್ವಯ ತಿಳಿಸಿದ ಅಗತ್ಯ ದಾಖಲೆಗಳನ್ನು ಒದಗಿಸಬೇಕು.
- ಕರ್ನಾಟಕ ರಾಜ್ಯಕ್ಕೆ ಸೇರಿದ ಅಭ್ಯರ್ಥಿಯು ಯಾವುದಾದರು ಒಂದು ಶಾಲೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳತಕ್ಕದ್ದು.
- ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯ ಪೋಷಕರು ತಮ್ಮ ಸ್ವಂತ ಮೊಬೈಲ್ ಸಂಖ್ಯೆಯನ್ನು ನೀಡತಕ್ಕದ್ದು ಕೆಲವು ಮಾಹಿತಿ/ಸೂಚನೆಗಳನ್ನು ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಿಕೊಡಲಾಗುವುದು.
- ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಯು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆಯನ್ನು ತರತಕ್ಕದ್ದು. ಒಂದು ವೇಳೆ ಯಾವುದೇ ವಿದ್ಯಾರ್ಥಿಯು SATS ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ತಮ್ಮ ಶಾಲೆಯ ಮುಖ್ಯಸ್ಥರನ್ನು ಭೇಟಿಮಾಡಿ ತಮ್ಮ SATS ಸಂಖ್ಯೆಯನ್ನು ಪಡೆದ ನಂತರವೇ ಅರ್ಜಿ ಸಲ್ಲಿಸುವುದು. ಈ ಕೆಳಗೆ ಸೂಚಿಸುರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಲು ಸಿದ್ಧಪಡಿಸಿಕೊಂಡಿರುವುದು.
ಈ ಎಲ್ಲಾ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡುವುದು. ಎಲ್ಲಾ ದಾಖಲೆಗಳು jpg/ipeg ಮತ್ತು 300kb ಗಾತ್ರದಲ್ಲಿ ಸಿದ್ಧಪಡಿಸಿರಬೇಕು.
- ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡುವ ಎಲ್ಲಾ ದಾಖಲೆಗಳು ಸ್ಪಷ್ಟವಾಗಿ ಓದುವ ಹಾಗೂ ಕಾಣುವ ರೀತಿ ಅಳವಡಿಸುವುದು.
- ಅಸ್ಪಷ್ಟ ದಾಖಲೆಗಳೊಂದಿಗೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗುವುದು.
- ಅಪೂರ್ಣವಾಗಿ ತುಂಬಿದ ಹಾಗೂ ಸಲ್ಲಿಸದೇ ಇರುವ ಅರ್ಜಿಯನ್ನು ಪರಿ ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ವೀಕೃತಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬೇಕು.
- ಅರ್ಜಿ ಅಥವಾ ದಾಖಲೆಯನ್ನು ಅಂಚೆಯ ಮೂಲಕ ಸಲ್ಲಿಸುವಂತಿಲ್ಲ. ಆನ್ನೈನ್ ಅರ್ಜಿ ಮಾತ್ರ ಸ್ವೀಕರಿಸಲಾಗುತ್ತದೆ. ನ
- ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಸಿದ್ದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
- ಅರ್ಜಿಯಲ್ಲಿ ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿಯಾಗಿದೆ ಎಂದು ಪರಿಶೀಲಿಸಿಕೊಳ್ಳತಕ್ಕದ್ದು. ಒಂದು ವೇಳೆ ಯಾವುದಾದರು ಲೋಪದೋಷಗಳು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಯ ಅರ್ಜಿಯನ್ನು ತಿರಸ್ಕರಿಸುವುದರೊಂದಿಗೆ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು.
- ಅಭ್ಯರ್ಥಿಯು ಪ್ರವೇಶ ಪರೀಕ್ಷೆಯನ್ನು ಬರೆಯುವ ಪೂರ್ವದಲ್ಲಿ ಅಥವಾ ದಾಖಲಾತಿ ಮಾಡುವ ಮುನ್ನ ತಮ್ಮ ದಾಖಲೆಗಳು ಸೂಕ್ತವಿರುವುದರ ಕುರಿತು ಪರೀಶಿಲಿಸಿಕೊಳ್ಳತಕ್ಕದ್ದು. ಸರಿಯಾದ ದಾಖಲೆ ಸಲ್ಲಿಸದಿದ್ದಲ್ಲಿ ವಿದ್ಯಾರ್ಥಿಯ ಆಯ್ಕೆಯನ್ನು ತಿರಸ್ಕರಿಸಲಾಗುವುದು. ಇದನ್ನು ಪ್ರಶ್ನಿಸುವ ಹಕ್ಕು ಇರುವುದಿಲ್ಲ.
- ಅರ್ಜಿಯ ಸಂಖ್ಯೆ/SATS ಸಂಖ್ಯೆಯನ್ನು ವೆಬ್ಸೈಟ್ನಲ್ಲಿ ನಮೂದಿಸುವುದರ ಮೂಲಕ ಅರ್ಜಿಯ ಸ್ವೀಕೃತಿಯನ್ನು ವೀಕ್ಷಿಸಬಹುದು.
- ಪ್ರವೇಶ ಪತ್ರವನ್ನು ಮಾರ್ಗಸೂಚಿಯಲ್ಲಿ ಸೂಚಿಸಿದ ದಿನಾಂಕಗಳ ಅವಧಿಯಲ್ಲಿ ಅರ್ಜಿಯ ಸಂಖ್ಯೆ /SATS ಸಂಖ್ಯೆಯನ್ನು ವೆಬ್ಸೈಟ್ನಲ್ಲಿ ನಮೂದಿಸುವುದರ ಮೂಲಕ ಪಡೆಯಬಹುದಾಗಿದೆ.
- ಯಾವುದೇ ಹೆಚ್ಚಿನ ಮಾಹಿತಿಗಾಗಿ ssakarnataka@outlook.com ಮೂಲಕ ಮಾಹಿತಿಯನ್ನು ಸಲ್ಲಿಸಿ ಪಡೆಯಬಹುದಾಗಿದೆ.
- ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರವನ್ನು ಹತ್ತಿರದ ಸ್ಥಳದಲ್ಲಿ ಯಾದೃಚ್ಛಿಕವಾಗಿ ಹಂಚಲಾಗುತ್ತದೆ. ಆದರ್ಶ ಶಾಲೆಯನ್ನು ಆಯ್ಕೆ ಮಾಡಿಕೊಂಡ ತಾಲ್ಲೂಕಿನಲ್ಲಿ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಲಾಗುತ್ತದೆ. ಅದನ್ನು ಮಾರ್ಪಡಿಸಲಾಗುವುದಿಲ್ಲ.
- ಎಸ್.ಎಂ. ಎಸ್ ಕಳುಹಿಸಲು ಮೂರನೇ ವ್ಯಕ್ತಿಯ ಎಸ್.ಎಂ. ಎಸ್ ಗೆಟ್ ವೇಗ ಗಳನ್ನು ಬಳಸಲಾಗುತ್ತದೆ ಈ ಗೆಟ್ ವೇಗ ಗಳಲ್ಲಿನ ವೈಫಲ್ಯಗಳು ಇಲಾಖೆಯ ಜವಾಬ್ದಾರಿಯಾಗಿರುವುದಿಲ್ಲ ಆದ್ದರಿಂದ, ಪಾಲುದಾರರು ವೆಬ್ಸೈಟ್ ನೋಡುತ್ತಲೇ ಇರಬೇಕು ಅಥವಾ ಆಯಾ ಆದರ್ಶ ವಿದ್ಯಾಲಯದೊಂದಿಗೆ ಸಂಪರ್ಕದಲ್ಲಿರಬೇಕು
.
..