---Advertisement---

ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಕಟ್ಟುನಿಟ್ಟಾಗಿ ಜಾರಿ: ರಾಜ್ಯ ಸರ್ಕಾರದ ಮಹತ್ವದ ಸುತ್ತೋಲೆ

By kspstadk.com

Published On:

Follow Us
---Advertisement---
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ, ಸಿಬಿಎಸ್‌ಇ, ಐಸಿಎಸ್‌ಇ, ಸೈನಿಕ ಹಾಗೂ ವಸತಿ ಶಾಲೆಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ–2016 (ಪರಿಷ್ಕರಣೆ–2023) ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ SOPಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ.

ಶಾಲೆಗಳಲ್ಲಿ ಮಕ್ಕಳ ಮೇಲಿನ ಹಿಂಸೆ, ನಿರ್ಲಕ್ಷ್ಯ, ಶೋಷಣೆ ಹಾಗೂ ಲೈಂಗಿಕ ದೌರ್ಜನ್ಯ ತಡೆಗಟ್ಟಿ, ಸುರಕ್ಷಿತ ಹಾಗೂ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸುವುದು ಈ ಆದೇಶದ ಪ್ರಮುಖ ಉದ್ದೇಶವಾಗಿದೆ.

ಮಕ್ಕಳ ಸುರಕ್ಷತಾ ಸಮಿತಿ: ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರ ಅಧ್ಯಕ್ಷತೆಯಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕು. ಸಮಿತಿಯಲ್ಲಿ ಶಿಕ್ಷಕರು, ಪೋಷಕರು, ಎಸ್‌ಡಿಎಂಸಿ ಅಧ್ಯಕ್ಷರು, ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಪ್ರತಿನಿಧಿಗಳು ಇರಬೇಕು. ತಿಂಗಳಿಗೊಮ್ಮೆ ಸಭೆ ನಡೆಸಿ ಮಕ್ಕಳ ಸುರಕ್ಷತೆ ಕುರಿತು ಪರಿಶೀಲನೆ ನಡೆಸಬೇಕು.

ಸಹಾಯವಾಣಿ ಪ್ರಚಾರ: ಶಾಲೆಯ ಪ್ರಮುಖ ಸ್ಥಳಗಳಲ್ಲಿ 1098 ಮಕ್ಕಳ ಸಹಾಯವಾಣಿ ಮತ್ತು 14499 ಉಚಿತ ಮಾನಸಿಕ ಆಪ್ತ ಸಮಾಲೋಚನೆ ಸಹಾಯವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು.

ದೂರು ಮತ್ತು ಸಲಹಾ ಪೆಟ್ಟಿಗೆ: ವಿದ್ಯಾರ್ಥಿಗಳಿಗೆ ಸುಲಭವಾಗಿ ತಲುಪುವ ಸ್ಥಳದಲ್ಲಿ ಬೀಗ ಹಾಕಿದ ದೂರು ಹಾಗೂ ಸಲಹಾ ಪೆಟ್ಟಿಗೆಯನ್ನು ಅಳವಡಿಸಿ, ವಾರಕ್ಕೊಮ್ಮೆ ಸಮಿತಿಯ ಸಮ್ಮುಖದಲ್ಲಿ ತೆರೆಯಬೇಕು ಹಾಗೂ ದೂರುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು.

ಪೋಷಕರ ಜಾಗೃತಿ: ನಿಯಮಿತ ಪೋಷಕರ ಸಭೆಗಳನ್ನು ನಡೆಸಿ ಮಕ್ಕಳ ರಕ್ಷಣಾ ನೀತಿ, ಸುರಕ್ಷತಾ ಕ್ರಮಗಳು ಹಾಗೂ ಮಕ್ಕಳೊಂದಿಗೆ ಉತ್ತಮ ಸಂವಹನದ ಕುರಿತು ಅರಿವು ಮೂಡಿಸಬೇಕು.

ಶಾಲಾ ಭದ್ರತೆ: ಶಾಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿ ಅಧಿಕೃತ ಗುರುತಿನ ಚೀಟಿ ಹೊಂದಿರಬೇಕು. ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಶಾಲಾ ಸಮಯಕ್ಕೂ ಕನಿಷ್ಠ 30 ನಿಮಿಷ ಮೊದಲು ಹಾಜರಾಗಬೇಕು.

ಸುರಕ್ಷತಾ ಶಿಕ್ಷಣ: ವಿದ್ಯಾರ್ಥಿಗಳಿಗೆ Safe Touch ಮತ್ತು Unsafe Touch ಕುರಿತು ವಯೋಮಾನಕ್ಕೆ ಅನುಗುಣವಾಗಿ ಅರಿವು ಮೂಡಿಸಬೇಕು.

ಮಧ್ಯಾಹ್ನದ ಊಟದ ಮೇಲ್ವಿಚಾರಣೆ: ಬಿಸಿಯೂಟ ಹಾಗೂ ಕ್ಷೀರಭಾಗ್ಯ ವಿತರಣೆ ವೇಳೆ ಶಿಕ್ಷಕರು ಕಡ್ಡಾಯವಾಗಿ ಉಪಸ್ಥಿತರಿದ್ದು ಮಕ್ಕಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಬೇಕು.

ಮೀನಾ ತಂಡ ಮತ್ತು Child Rights Club: ಎಲ್ಲಾ ಶಾಲೆಗಳಲ್ಲಿ ಮೀನಾ ತಂಡ ಹಾಗೂ ಮಕ್ಕಳ ಹಕ್ಕುಗಳ ಕ್ಲಬ್‌ಗಳನ್ನು ರಚಿಸಿ ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.

ಈ ಸುತ್ತೋಲೆಯ ಮೂಲಕ ಪ್ರತಿಯೊಂದು ಶಾಲೆಯನ್ನು ಸುರಕ್ಷಿತ, ಭಯಮುಕ್ತ ಮತ್ತು ಮಕ್ಕಳ ಸ್ನೇಹಿ ಕಲಿಕಾ ವಾತಾವರಣವನ್ನಾಗಿ ರೂಪಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಎಲ್ಲಾ ಶಾಲೆಗಳು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ.

Google Drive PDF Viewer
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment