ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳ ಕುರಿತು ಶಾಲೆಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು

WhatsApp Group Join Now
Telegram Group Join Now

ಡೆಂಗ್ಯೂ, ಚಿಕನ್ ಗುನ್ಯಾ, ಝೀಕಾ ಮೊದಲಾದ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸಮುದಾಯದ ಸಹಭಾಗಿತ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಶಾಲೆಯ ವಿದ್ಯಾರ್ಥಿಗಳ ಬೋಧಕರ ಹಾಗೂ ಬೋಧಕೇತರ ಸಿಬ್ಬಂದಿಗಳ ಆರೋಗ್ಯದ ದೃಷ್ಟಿಯಿಂದ ಈ ಕೆಳಕಂಡ ಕ್ರಮಗಳನ್ನು ವಹಿಸಲು ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಈ ಮೂಲಕ ಸೂಚಿಸಿದೆ.

  1. ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಗಣತ್ಯಾ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸತಕ್ಕದ್ದು ಹಾಗೂ ಇಂತಹ ಸನ್ನಿವೇಶಗಳ ಅಕ್ಕಪಕ್ಕ ವಿದ್ಯಾರ್ಥಿಗಳು ಸುಳ್ಯದಂತೆ ಎಚ್ಚರ ವಹಿಸುವುದು. ಇವುಗಳನ್ನು ತೆರವುಗೊಳಿಸಲು ಹಾಗೂ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು.
  2. ಇಂತಹ ಸಂದರ್ಭಗಳಲ್ಲಿ ತಳಿಯ ಗ್ರಾಮ ಪಂಚಾಯತಿ ಪುರಸಭೆ ನಗರ ಸಭೆ ಮಹಾನಗರ ಪಾಲಿಕೆಗಳ ಹಾಗೂ ಸ್ಥಳೀಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಿ ಸಾಂಕ್ರಾಮಿಕ ರೋಗ ನಿವಾರಕ ದ್ರಾವಣವನ್ನು ಸಿಂಪಡಿಸಲು ಅಗತ್ಯ ಕ್ರಮ ವಹಿಸುವುದು.
  3. ಶಾಲೆಯಲ್ಲಿನ ನೀರಿನ ಸಂಗ್ರಹಕಗಳನ್ನು ವಾರಕ್ಕೊಮ್ಮೆ ತೊಳೆದು ಖಾಲಿ ಮಾಡಿ ಒಣಗಿಸಿದ ನಂತರ ಭರ್ತಿ ಮಾಡುವುದು ಹಾಗೂ ಭದ್ರವಾದ ಮುಚ್ಚಳದಿಂದ ಮುಚ್ಚುವುದು.
  4. ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ನಿಯಂತ್ರಣದ ಕುರಿತು ಆರೋಗ್ಯ ಅಧಿಕಾರಿ/ ಶಾಲಾ ಶಿಕ್ಷಕರಿಂದ ಆರೋಗ್ಯ ಶಿಕ್ಷಣ ನೀಡುವುದು.
  5. ಈ ರೋಗಗಳು ಹರಡದಂತೆ ತಡೆಗಟ್ಟಲು ಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ನಿಯಂತ್ರಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸಹಭಾಗಿತ್ವ ಹಾಗೂ ಪಾತ್ರದ ಕುರಿತು ಶಾಲೆಗಳಲ್ಲಿ ಭಾಷಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಕಿರು ನಾಟಕಗಳು ಇತ್ಯಾದಿ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು. ಸೈನ್ಸ್ ಕ್ಲಬ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು. ಈ ಮಾಹಿತಿಯು ಪೋಷಕರು ಹಾಗೂ ಸಮುದಾಯಕ್ಕೆ ತಲುಪುವಂತೆ ಮಾಡುವುದು.
  6. ಒಂದು ವೇಳೆ ಶಾಲಾ ವಿದ್ಯಾರ್ಥಿಗಳಲ್ಲಿ ಇಂತಹ ಜ್ವರ ಪ್ರಕರಣಗಳು ಕಂಡು ಬಂದರೆ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವುದು. ಶಾಲೆಗಳಲ್ಲಿ ಗುಂಪು ಜ್ವರ ಪ್ರಕರಣಗಳು ಕಂಡುಬಂದರೆ ಕೂಡಲೇ ತಾಲೂಕು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರುವುದು. ಇತರ ವಿದ್ಯಾರ್ಥಿಗಳನ್ನು ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರ ವಹಿಸುವುದು ಅಗತ್ಯ.

ಈ ಮೇಲ್ಕಂಡ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ
ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಸೂಚಿಸಲಾಗಿದೆ.

WhatsApp Group Join Now
Telegram Group Join Now
Sharing Is Caring:

Leave a Comment