ರಾಜ್ಯದ ಎಲ್ಲಾ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನವಾಗಿರುತ್ತದೆ. ಶಾಲಾ ಮಕ್ಕಳಿಗೆ ಸುರಕ್ಷಿತ ಹಾಗೂ ಪೌಷ್ಟಿಕಾಂಶ ಯುಕ್ತ ಬಿಸಿಯೂಟವನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡುವುದು ಶಾಲಾ ಶಿಕ್ಷಣ ಇಲಾಖೆಯ ಗುರಿಯಾಗಿರುತ್ತದೆ. ಸದರಿ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಪ್ರತಿಯೊಂದು ಶಾಲೆಯಲ್ಲಿಯೂ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಅಗತ್ಯವಿರುತ್ತದೆ.
ರಾಜ್ಯದಲ್ಲಿ 46612 ಸರ್ಕಾರಿ ಶಾಲೆಗಳು ಹಾಗೂ 6198 ಅನುದಾನಿತ ಶಾಲೆಗಳು, ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಮತ್ತು ಸಂಪೂರ್ಣ ರಾಜ್ಯ ಸರಕಾರದ ಅನುದಾನದ ಕ್ಷೀರ ಭಾಗ್ಯ ಯೋಜನೆಗೆ ಒಳಪಡುತ್ತವೆ. ಸ್ವಯಂಸೇವಾ ಸಂಘಗಳಿಗೆ ಒಳಪಟ್ಟಿರುವ ಶಾಲೆಗಳನ್ನು ಒಳಗೊಂಡು ತಮ್ಮ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಶಾಲೆಗಳಲ್ಲಿ ಕಡ್ಡಾಯವಾಗಿ ನುಗ್ಗೆ ಕರಿಬೇವು ಬೆಟ್ಟದ ನೆಲ್ಲಿಕಾಯಿ ಪೇರಳೆ ಹಾಗೂ ಸೀತೆ ಗಿಡಗಳನ್ನು ಬೆಳೆಸುವ ಅಗತ್ಯವಿರುತ್ತದೆ. ಅವಕಾಶವಿರುವಿಡೆ ಸೊಪ್ಪು ತರಕಾರಿ ಹಾಗೂ ಹಣ್ಣಿನ ಗಿಡಗಳನ್ನು ನೆಡುವಂತೆ ಕ್ರಮವಹಿಸುವುದು. 2025 26 ನೇ ಸಾಲಿನಲ್ಲಿ ಎಲ್ಲಾ ಶಾಲೆಗಳಲ್ಲಿ ಪೌಷ್ಟಿಕವಾದ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಡ್ಡಾಯವಾಗಿ ಪೌಷ್ಟಿಕ ವನ ನಿರ್ಮಾಣ ಮಾಡುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಕಚೇರಿಗೆ ವರದಿ ಕಳುಹಿಸಬೇಕೆಂದು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಇವರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿರುತ್ತಾರೆ.
