---Advertisement---

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ: ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ

By kspstadk.com

Published On:

Follow Us
---Advertisement---
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಕಡ್ಡಾಯವಾಗಿ ಹಾಡಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸುತ್ತೋಲೆಯ ಪ್ರಕಾರ, ಪ್ರತಿದಿನ ಶಾಲೆಯ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ, ಲಯಬದ್ಧವಾಗಿ ಹಾಗೂ ಶುದ್ಧ ಉಚ್ಚಾರಣೆಯೊಂದಿಗೆ ನಾಡಗೀತೆಯನ್ನು ಹಾಡಬೇಕು. ನಾಡಗೀತೆಯನ್ನು ನಿಗದಿತ ಸಮಯದಲ್ಲಿ ಶಿಸ್ತಿನಿಂದ ಹಾಡಿಸುವ ಜವಾಬ್ದಾರಿ ಶಾಲಾ ಮುಖ್ಯಸ್ಥರ ಮೇಲಿದೆ.


ವಿದ್ಯಾರ್ಥಿಗಳಿಗೆ ನಾಡಗೀತೆಯನ್ನು ಸರಿಯಾದ ಸ್ವರ, ಲಯ ಮತ್ತು ಉಚ್ಚಾರಣೆಯೊಂದಿಗೆ ಹಾಡಲು ಸಂಗೀತ ಶಿಕ್ಷಕರ ಮೂಲಕ ತರಬೇತಿ ನೀಡಬೇಕು. ಕನ್ನಡ ಭಾಷಾ ಶಿಕ್ಷಕರು ನಾಡಗೀತೆಯ ಅರ್ಥ, ಆಶಯ ಮತ್ತು ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಬೇಕು.


ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಸೇರಿದಂತೆ ವಿವಿಧ ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಸಂದರ್ಭದಲ್ಲಿ ಮತ್ತು ಶಾಲಾ ವಾರ್ಷಿಕೋತ್ಸವಗಳಲ್ಲಿಯೂ ನಾಡಗೀತೆಯನ್ನು ಕಡ್ಡಾಯವಾಗಿ ಹಾಡಿಸಬೇಕು ಎಂದು ಸೂಚಿಸಲಾಗಿದೆ.


ಸುತ್ತೋಲೆಯಲ್ಲಿ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ನಿಯಮಗಳ ಪಾಲನೆಯಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಿತ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ನಾಡಗೀತೆಯ ಬಗ್ಗೆ ಗೌರವ ಹಾಗೂ ಅಭಿಮಾನವನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ.

“`1
WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment