ಶಿಕ್ಷಕರ ವರ್ಗಾವಣೆಯ ಕುರಿತ ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವರಿಂದ ಭರವಸೆ
ಶಿಕ್ಷಕರು ತಾವು ಬಯಸುವ ಜಿಲ್ಲೆಗೆ ವರ್ಗಾವಣೆ ನೀಡಬೇಕು, ಪರಸ್ಪರ ವರ್ಗಾವಣೆಗೆ ಮುಕ್ತ ಅವಕಾಶ ಕಲ್ಪಿಸಬೇಕು ಮತ್ತು ಶೇಕಡಾ 25 ಕ್ಕಿಂತ ಹೆಚ್ಚು ಖಾಲಿ ಇರುವ ಹುದ್ದೆಗಳಿಗೆ ಯಾವುದೇ ನಿಬಂಧನೆಗಳಿಲ್ಲದೇ ವರ್ಗಾವಣೆ ಕಲ್ಪಿಸುವಂತೆ ಸೂಕ್ತ ತಿದ್ದುಪಡಿ ತರಬೇಕೆನ್ನುವ ಮನವಿಯನ್ನು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದ್ದು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸುವಂತೆ ಶಿಕ್ಷಣ ಸಚಿವರಿಗೆ ಕೋರಲಾಗಿತ್ತು.
ಈ ಮನವಿಯನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿರುವುದಾಗಿ ಮಾಹಿತಿ ಲಭಿಸಿದೆ.